July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆಯವರ ಸಹಕಾರದೊಂದಿಗೆ, ಯುವ ಉದ್ಯಮಿ ಹಾಗೂ ಸಾಮಾಜಿಕ ಸಂಘಟಕ, ಕೊಡುಗೈ ದಾನಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ ಅವರೇ ಈ ಮಾದರಿ ಕಾರ್ಯ ಮಾಡಿದವರು.

ಎಳೆಯ ಮಗುವಿನ ಲಿವರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಕಡಿರುದ್ಯಾವರದ ಹಿಂದೂ ಕುಟುಂಬವೊಂದಕ್ಕೆ, ಉಳಿದಂತೆ ವಿಕಲಚೇತನರಾಗಿ ಮಲಗಿದಲ್ಲೇ ಇರುವ ಬೆಳ್ತಂಗಡಿ ಸಂಜಯ ನಗರದ ಕುಟುಂಬವೊಂದಕ್ಕೆ, ಮೇಲಂತಬೆಟ್ಟು ಗ್ರಾಮದ ಇಬ್ಬರು ವಿಧವೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುತ್ತಿರುವ ಮುಸ್ಲಿಂ ಕುಟುಂಬಕ್ಕೆ ಶಮೀಮ್ ಅವರು ರೇಷನ್ ಕಿಟ್ ಹಸ್ತಾಂತರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
error: Content is protected !!