ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ 31ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಕೆ. ಗಂಗಾಧರ ಕುಲಾಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಡೆಪ್ಯುಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಹಿತಿ, ಯಕ್ಷಗಾನ ಕಲಾವಿದ ಮಹೇಶ್ ಕುಲಾಲ್ ಅರ್ತಿಮೂಲೆ, ತಾಲೂಕು ತುಳುನಾಡ ಒಕ್ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು, ಅರಸಿನಮಕ್ಕಿ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಮಂಜುಳಾ, ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ವಿಭಾಗೀಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ಕಾಯರ್ತಡ್ಕ ಕುಂಭಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ವಿಜಯ್ ಕೆ., ಚಾರ್ಮಾಡಿ ಪಂಚಶ್ರೀ ಕಲಾಕೂಟದ ಅಧ್ಯಕ್ಷ, ರಂಗ ಕಲಾವಿದ ಶ್ರೀನಿವಾಸ ಕುಲಾಲ್ ಕಕ್ಕಿಂಜೆ, ಕಲಾವಿದ ಎಚ್. ಕೆ. ನಯನಾಡು, ರಾಮ ಕುಲಾಲ್ ಉಪ್ಪಿನಂಗಡಿ ಭಾಗವಹಿಸಿದರು.

ಕೊಕ್ಕಡ ಪಂಚಮಿ ಹಿತಾಯುರ್ಧಾಮದ ಹಿರಿಯ ವೈದ್ಯ ಡಾ| ಮೋಹನದಾಸ ಗೌಡ ಕೊಕ್ಕಡ ಇವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಅಂಗನವಾಡಿಯಿಂದ ಪಿ. ಯು. ಸಿ ವರೆಗಿನ ಮಕ್ಕಳಿಗೆ ಪುಸ್ತಕ ವಿತರಣೆ, ವಿವಿಧ ಸ್ಪರ್ಧೆ ಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಎಸ್. ಎಸ್. ಎಲ್. ಸಿ ಯಲ್ಲಿ ಹೆಚ್ಚು ಅಂಕ ಪಡೆದ ತೇಜಸ್ವಿ ಬಡೆಕ್ಕಲ, ಮಂಗಳೂರಿನಲ್ಲಿ ನಡೆದ ಕುಲಾಲ ಕಲಾವಳಿಯಲ್ಲಿ ನಾಟಕದಲ್ಲಿ ಪ್ರಶಸ್ತಿ ಪಡೆದ ರುಕ್ಮಯ್ಯ ಕುಲಾಲ್ ಮತ್ತು ತಂಡವನ್ನು ಗೌರವಿಸಲಾಯಿತು. ವಿದ್ಯಾ ನಿಧಿಯನ್ನು ಉನ್ನತ ವಿದ್ಯಾಭ್ಯಾಸಕ್ಕಾಗಿ ಬಿಂಧು ಕುಲಾರ್ ರವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಡೆಪ್ಯುಟಿ ಕಮಾಂಡೆಂಟ್ ಚಂದಪ್ಪ ಮೂಲ್ಯರವರು ಹಿಂದುಗಳು ಭಗವದ್ಗೀತೆ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ನೀಡುವ ಪುಸ್ತಕಗಳನ್ನು ಹಂಚಲಾಯಿತು.

ಮಕ್ಕಳು ಪ್ರಾರ್ಥಿಸಿದರು. ರುಕ್ಮಯ್ಯ ಕುಲಾಲ್ ಸ್ವಾಗತಿಸಿದರು. ಗಣೇಶ್ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ ಯು. ಸಿ. ಕುಲಾಲ್ ವರದಿ ವಾಚಿಸಿದರು. ಪ್ರವೀಣ್ ಯು. ಸಿ. ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಅಶೋಕ್ ಕುಲಾಲ್ ಧನ್ಯವಾದವಿತ್ತರು.
ಮಧ್ಯಾಹ್ನ ನಂತರ ಮಕ್ಕಳು ಹಾಗೂ ಹವ್ಯಾಸಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

Related posts

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya
error: Content is protected !!