ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಂಡಗಳ ನಿರ್ವಹಣೆ ಇನ್ನಿತರ ವಿಷಯಗಳ ಬಗ್ಗೆ ಸಭೆಗೆ ತಿಳಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ಲೆಕ್ಕಪರಿಶೋಧನೆ ಬಗ್ಗೆ ಜಾತ್ರಾ ಪ್ರಯುಕ್ತ ಶ್ರಮದಾನ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಸಂತೋಷ್ ಉಪಾಧ್ಯಕ್ಷರುಗಳಾದ ಸದಾನಂದ ಪೂಜಾರಿ ಯಶೋಧರ ಸುವರ್ಣ ಶ್ರೀಮತಿ ಮಲ್ಲಿಕಾ ಉಪಸ್ಥಿತರಿದ್ದರು.
ಜವಾಬ್ದಾರಿ ತಂಡ ಪಂಚಮಿ ಸ್ವಸಹಾಯ, ಮಂಜುನಾಥ ಆಚಾರ್ಯ ಸ್ವಾಗತಿಸಿದರು. ತಂಡದ ವರದಿ ವಾಚಿಸಿದರು. ಒಕ್ಕೂಟದ ವರದಿ ನಿರೂಪಣೆಯನ್ನು ಸಂತೋಷ್ ಮಾಡಿದರು. ವಸಂತ ಪೂಜಾರಿ ಧನ್ಯವಾದವಿತರು.











