22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

ಇಳಂತಿಲ: ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ ಮತ್ತು ಸಂಘಟಿತ ಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದೂ ಸಂಗಮ ಮಡಂತ್ಯಾರು ನಿರ್ವಹಣಾ ತಂಡದ ವತಿಯಿಂದ ಕರಾಯ ಮಂಡಲ ನಿರ್ವಹಣಾ ತಂಡದ ಪದಾಧಿಕಾರಿಗಳಿಗಾಗಿ ಪ್ರಶಿಕ್ಷಣ ವರ್ಗ ಹಾಗೂ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ.11 ರಂದು ವಾಣಿಶ್ರೀ ಭಜನಾ ಮಂದಿರ ವಾಣಿ ನಗರ ಇಳಂತಿಲ ಇಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಹಿಂದೂ ಸಂಗಮದ ಆಶಯ, ಪದಾಧಿಕಾರಿಗಳ ಜವಾಬ್ದಾರಿಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಾಮಾಜಿಕ ಮುಂದಾಳು ಸುದರ್ಶನ್ ಕೊಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದರು.

ಪ್ರಶಿಕ್ಷಣ ವರ್ಗವನ್ನು ವಿಜಯ ಅರಳಿ , ಮತ್ತು ರವಿ ಇಳಂತಿಲ ನಡೆಸಿಕೊಟ್ಟರು. ಸಭೆಯಲ್ಲಿ ತಾಲೂಕು ಆಯೋಜನಾ ಸಮಿತಿಯ ಉಪಾಧ್ಯಕ್ಷ ಸುಬ್ರಮಣ್ಯ ಕುಮಾರ್ ಅಗರ್ತ, ಜೊತೆ ಕಾರ್ಯದರ್ಶಿ ಕರಾಯ ಮಂಡಲ ನಿರ್ವಹಣಾ ತಂಡದ ಸಂಯೋಜಕರಾದ ಜಗದೀಶ್ ಶೆಟ್ಟಿ ಮೈರಾ, ಊರಿನ ಗಣ್ಯರು ಹಾಗೂ ಪರಿವಾರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕರಾಯ, ಇಳಂತಿಲ ಮತ್ತು ಮೊಗ್ರು ಗ್ರಾಮಗಳಿಂದ ಸುಮಾರು 109 ಮಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!