July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಜ.12 ರಂದು ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪನ್ಯಾಸಕ ಹಾಗೂ ವೈದ್ಯಕೀಯ ಅಧಿಕಾರಿ ಡಾ. ಯೋಹಿ ಧರ್ಮರಾಜನ್ ವಿದ್ಯಾರ್ಥಿಗಳನ್ನುದ್ದೇಶಿಸಿ ತಮ್ಮ ಗುರಿ ತಲುಪುವ ಮಾರ್ಗ ಹಾಗೂ ಅರೋಗ್ಯವನ್ನು ಉತ್ತಮಗೊಳಿಸುವ ವಿಧಾನಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನೃತ್ಯ, ಸಮೂಹ ಗಾಯನ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪೂರ್ವಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಧೃತಿ ನಿರೂಪಿಸಿದರು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!