ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಜ.12 ರಂದು ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪನ್ಯಾಸಕ ಹಾಗೂ ವೈದ್ಯಕೀಯ ಅಧಿಕಾರಿ ಡಾ. ಯೋಹಿ ಧರ್ಮರಾಜನ್ ವಿದ್ಯಾರ್ಥಿಗಳನ್ನುದ್ದೇಶಿಸಿ ತಮ್ಮ ಗುರಿ ತಲುಪುವ ಮಾರ್ಗ ಹಾಗೂ ಅರೋಗ್ಯವನ್ನು ಉತ್ತಮಗೊಳಿಸುವ ವಿಧಾನಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನೃತ್ಯ, ಸಮೂಹ ಗಾಯನ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪೂರ್ವಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಧೃತಿ ನಿರೂಪಿಸಿದರು.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!