July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

ಕೊಕ್ಕಡ: ಇತ್ತೀಚೆಗೆ ಹೃದಯಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ದಿ. ಪದ್ಮನಾಭ ಆಚಾರ್ಯ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ವಾಸಿಸಲು ಯೋಗ್ಯವಾದ ಮನೆ ಇಲ್ಲದೆ, ಎರಡು ಹೆಣ್ಣು ಮಕ್ಕಳೊಂದಿಗೆ ಸಂಕಷ್ಟಕರ ಜೀವನ ನಡೆಸುತ್ತಿದ್ದ ಕುಟುಂಬದ ದುಸ್ಥಿತಿಯನ್ನು ಮನಗಂಡು ಕೊಕ್ಕಡದ ಸಮಾಜಸೇವಕರು ಮಾನವೀಯ ನೆರವಿಗೆ ಮುಂದಾದರು.

ಕೊಕ್ಕಡದ ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ರಕ್ತೇಶ್ವರಿ ಪೆಟ್ರೋ ಪಾಯಿಂಟ್‌ನ ಮಾಲಕ ಉದ್ಯಮಿ ನಾರಾಯಣ ಗೌಡ, ಸೌತಡ್ಕ ಮಹಾಗಣಪತಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಶಾಂತಪ್ಪ ಮಡಿವಾಳ, ರಜಾಕ್ ಕೊಕ್ಕಡ, ಜಾರ್ಜ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ, ಮೃತರ ಸಹೋದರ ದಿನೇಶ ಆಚಾರ್ಯ ಸೇರಿದಂತೆ ಹಲವು ಗಣ್ಯರು ಒಟ್ಟಾಗಿ ಕೈಜೋಡಿಸಿ, ದಿ.ಪದ್ಮನಾಭ ಆಚಾರ್ಯ ಅವರ ಪಾಳು ಬಿದ್ದ ಮೂಲ ಮನೆಯನ್ನು ದುರಸ್ತಿಗೊಳಿಸುವ ಕಾರ್ಯಕೈಗೊಂಡರು. ಸಹೃದಯ ಬಂಧುಗಳು ಹಾಗೂ ದಾನಿಗಳಿಂದ ಸುಮಾರು ಎರಡುವರೆ ಲಕ್ಷ ರೂ. ಮೊತ್ತದ ಹಣವನ್ನು ಸಂಗ್ರಹಿಸಿ, ಸುಮಾರು 50ಕ್ಕೂ ಅಧಿಕ ಮಂದಿ ಶ್ರಮದಾನ ಮಾಡುವ ಮೂಲಕ ಮನೆ ಸಂಪೂರ್ಣವಾಗಿ ದುರಸ್ತಿ ಮಾಡಲಾಯಿತು.

ದುರಸ್ತಿ ಕಾರ್ಯ ಪೂರ್ಣಗೊಂಡ ಬಳಿಕ ನಡೆದ ಸರಳ ಸಮಾರಂಭದಲ್ಲಿ ದಿ.ಪದ್ಮನಾಭ ಆಚಾರ್ಯ ಅವರ ಪತ್ನಿ ಶೋಭಾ ಅವರಿಗೆ ಮೃತರ ತಾಯಿ ಸುಶೀಲ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಶಾಲಿನಿ ಶಾಂತಪ್ಪ ಮಡಿವಾಳ ಅವರು ಮನೆಯ ಕೀಲಿಕೈಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಾನಿಗಳಾದ ತುಕ್ರಪ್ಪ ಶೆಟ್ಟಿ ನೂಜೆ, ರಕ್ತೇಶ್ವರಿ ಪೆಟ್ರೋ ಪಾಯಿಂಟ್‌ನ ಮಾಲಕ ನಾರಾಯಣ ಗೌಡ, ಕಿರಿಯರಾದ ಈಶ್ವರ ಭಟ್ ಹಿತ್ತಿಲು, ರಜಾಕ್ ಕೊಕ್ಕಡ, ಜಾರ್ಜ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ, ಶಾಂತಪ್ಪ ಮಡಿವಾಳ, ಲಾರೆನ್ಸ್ ಪಾೈಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಸಹಕಾರ ನೀಡಿದ ಎಲ್ಲರಿಗೂ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.

Related posts

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya
error: Content is protected !!