ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

ಅಳದಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬ್ರಹತ್ ಬ್ರಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣವು ಜ 29 ರಂದು ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಯು ಜ 11ರಂದು ನಡೆಯಿತು.

ಸಭೆಯಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ಡಾ.ಪ್ರದೀಪ್ ಎ ಅವರು ಸಹಸ್ರಾರು ಭಕ್ತಾದಿಗಳಿಂದ ಏಕ ಕಂಠದಲ್ಲಿ ಬೃಹತ್ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ.ಸಾತ್ವಿಕ ಚಿಂತನೆ ಉದ್ದೀಪನಗೊಳಿಸುವ ಈ ಕಾರ್ಯಕ್ರಮದಲ್ಲಿ ನಾವೆಲ್ಲರೂ ಜೊತೆಯಾಗಬೇಕೆಂದರು. ನಾವೂರಿನ ದೇವಸ್ಥಾನದಲ್ಲಿ ನಡೆಯುವ ಸತ್ ಚಿಂತನೆಯ ಕಾರ್ಯಯೋಜನೆಗಳು ಅಲ್ಲಿಗೆ ಮಾತ್ರ ಸೀಮಿತವಾಗದೆ ಇಡೀ ಸಮಾಜಕ್ಕೆ ತಲುಪಬೇಕು ಎಂದರು.

ವೇದಿಕೆಯಲ್ಲಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ್ ಡೋಂಗ್ರೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಯೋಜನಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.

ಸಭೆಯಲ್ಲಿ ಡಾ.ತುಳಪುಳೆ, ನಿತ್ಯಾನಂದ ನಾವರ, ನಿರಂಜನ್ ಜೋಶಿ, ಸತೀಶ್ ಪೂಜಾರಿ ನಮನ, ಮೋಹನ್ ದಾಸ್, ವಿಜಯ್ ನಾವರ, ಮಾಲಾ ಎಂ.ಕೆ, ಮಂಜುನಾಥ ಆಚಾರ್ಯ ಸೇರಿದಂತೆ ಯೋಜನೆಯ ಪದಾಧಿಕಾರಿಗಳು,ಊರವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya
error: Content is protected !!