23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

ಅಳದಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬ್ರಹತ್ ಬ್ರಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣವು ಜ 29 ರಂದು ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಯು ಜ 11ರಂದು ನಡೆಯಿತು.

ಸಭೆಯಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ಡಾ.ಪ್ರದೀಪ್ ಎ ಅವರು ಸಹಸ್ರಾರು ಭಕ್ತಾದಿಗಳಿಂದ ಏಕ ಕಂಠದಲ್ಲಿ ಬೃಹತ್ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ.ಸಾತ್ವಿಕ ಚಿಂತನೆ ಉದ್ದೀಪನಗೊಳಿಸುವ ಈ ಕಾರ್ಯಕ್ರಮದಲ್ಲಿ ನಾವೆಲ್ಲರೂ ಜೊತೆಯಾಗಬೇಕೆಂದರು. ನಾವೂರಿನ ದೇವಸ್ಥಾನದಲ್ಲಿ ನಡೆಯುವ ಸತ್ ಚಿಂತನೆಯ ಕಾರ್ಯಯೋಜನೆಗಳು ಅಲ್ಲಿಗೆ ಮಾತ್ರ ಸೀಮಿತವಾಗದೆ ಇಡೀ ಸಮಾಜಕ್ಕೆ ತಲುಪಬೇಕು ಎಂದರು.

ವೇದಿಕೆಯಲ್ಲಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ್ ಡೋಂಗ್ರೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಯೋಜನಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.

ಸಭೆಯಲ್ಲಿ ಡಾ.ತುಳಪುಳೆ, ನಿತ್ಯಾನಂದ ನಾವರ, ನಿರಂಜನ್ ಜೋಶಿ, ಸತೀಶ್ ಪೂಜಾರಿ ನಮನ, ಮೋಹನ್ ದಾಸ್, ವಿಜಯ್ ನಾವರ, ಮಾಲಾ ಎಂ.ಕೆ, ಮಂಜುನಾಥ ಆಚಾರ್ಯ ಸೇರಿದಂತೆ ಯೋಜನೆಯ ಪದಾಧಿಕಾರಿಗಳು,ಊರವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Related posts

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya
error: Content is protected !!