September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

ತೆಂಕಕಾರಂದೂರು: ಹಿಂದೂ ಸಂಗಮ ಆಯೋಜನಾ ಸಮಿತಿ ನೇತೃತ್ವದಲ್ಲಿ ಬಳಂಜ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಜ 11 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜ.25 ರಂದು ಮಧ್ಯಾಹ್ನ 2.30 ಕ್ಕೆ ಹಿಂದೂ ಸಂಗಮ‌ ಕಾರ್ಯಕ್ರಮ ನಡೆಯಲಿದೆ. ಹಿಂದೂ ಸಂಗಮ‌ ಶೋಭಾಯಾತ್ರೆಯು ಗುಂಡೇರಿಯಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಸಾಗಿ ಬರಲಿದೆ.ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಉದ್ಯಮಿ ಶೀತಲ್ ಜೈನ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ನೊಚ್ಚ, ಬಳಂಜ ಮಂಡಲ ನಿರ್ವಹಣಾ ಸಮಿತಿ ಸಂಚಾಲಕ ರಾಕೇಶ್ ಹೆಗ್ಡೆ, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ನವೀನ್ ಕೆ ಸಾಮಾನಿ, ಶ್ರೀನಿವಾಸ್ ರೈ ಕಾರಂದೂರು, ರಾಘವೇಂದ್ರ ಭಟ್ ಬಳಂಜ, ಪ್ರಶಾಂತ್ ಶೆಟ್ಟಿ ಕರಂಬಾರು, ರಮೇಶ್ ಬಜನೋಡಿ, ವಿದ್ಯಾನಂದ ಕಟ್ಟೆ , ಲೀಲಾವತಿ ಕಟ್ಟೆ, ಪ್ರಕಾಶ್ ಆಚಾರ್ಯ, ರಕ್ಷಿತ್ ಕರಂಬಾರು, ಸೋಮನಾಥ ಶಿರ್ಲಾಲು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!