22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿತ್ತು.

ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡ ಬಳಿಕ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ವೇಣೂರ ಅರಣ್ಯ ಇಲಾಖೆಯ ನಯನಾಡ್ ನಲ್ಲಿರುವ ಗಸ್ತುವಲಯ ವಸತಿಗೃಹದ ಬಳಿ ಬಂಟ್ವಾಳ ಪಶುವೈದ್ಯರಾದ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಜ.11 ರಂದು ಚಿರತೆಯ ಶವಪರೀಕ್ಷೆ ಮಾಡಲಾಗಿದ್ದು. ಈ ವೇಳೆ ಚಿರತೆಯ ಕುತ್ತಿಗೆ ಭಾಗಕ್ಕೆ ಗಾಯಗಳ ಗುರುತು ಮತ್ತು ಹೊಟ್ಟೆಯಲ್ಲಿ ನಾಯಿ ಮಾಂಸ ಕೂಡ ಪತ್ತೆಯಾಗಿದೆ. ಶವಪರೀಕ್ಷೆ ನಡೆಸಿದ ಬಳಿಕ ಅಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಚಿರತೆಯನ್ನು ಎಸಿಎಫ್ ಶ್ರೀಧರ್.ಪಿ ನೇತೃತ್ವದಲ್ಲಿ ಕಾನೂನು ಪ್ರಕಾರ ದಹನ ಮಾಡಲಾಯಿತು.

ಚಿರತೆ ಕಾಡುಹಂದಿಗೆ ಇಟ್ಟ ಉರುಳಿಗೆ ಅಥವಾ ತಂತಿಬೇಲಿಗೆ ಸಿಕ್ಕಿಬಿದ್ದು ಗಾಯಗೊಂಡು ಬಳಿಕ ಮೃತಪಟ್ಟ ಶಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶವಪರೀಕ್ಷೆ ಮಾಡಿದ ಚಿರತೆಯ ವಿವಿಧ ಭಾಗಗಳನ್ನು ಸಾವಿನ ಬಗ್ಗೆ ದೃಢಪಡಿಸಲು ಹೈದರಾಬಾದ್ ಅಥವಾ ಬೆಂಗಳೂರು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಚಿರತೆಯ ಶವಪರೀಕ್ಷೆ ವೇಳೆ ಬಂಟ್ವಾಳ ಪಶುವೈದ್ಯ ಅಶೋಕ್ ಶೆಟ್ಟಿ ತಂಡ ಹಾಗೂ ಮೂಡಬಿದಿರೆ ಎಸಿಎಫ್ ಶ್ರೀಧರ್.ಪಿ, ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಹಾಗೂ ಇತರ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya
error: Content is protected !!