ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.
ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.
ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.











