22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಮತ್ತು ಆಸ್ಪತ್ರೆ ಶಾಂತಿವನ ಇದರ ಉಪನ್ಯಾಸಕರು ಮತ್ತು ವೈದ್ಯಾಧಿಕಾರಿಗಳು ಆಗಿರುವ ಡಾ. ಪಕೃತಿ ಕೆದಿಲಾ ಇವರು ಆಗಮಿಸಿದ್ದರು. ಇವರು ವಿವಿಧ ಚಟುವಟಿಕೆಗಳ ಮುಖಾಂತರ ವಿಧ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ, ಯೋಜನೆ ,ಯೋಗ ಜ್ಞಾನ ಇತ್ಯಾದಿಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರು ಯುವಜನತೆಯಲ್ಲಿ ಇರಬೇಕಾದ ವಿಶೇಷ ಗುಣಗಳು, ಗುರಿ ತಲುಪುವ ಮಾರ್ಗಗಳು ಇತ್ಯಾದಿಗಳನ್ನು ವಿಧ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ವಿದ್ಯಾರ್ಥಿ ಸಾರ್ಥಕ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶ್ರವಣ್ ಸ್ವಾಗತಿಸಿ, ಕುಮಾರಿ ಯಜ್ಞ ಅತಿಥಿಗಳ ಕಿರು ಪರಿಚಯ ಮಾಡಿಕೊಟ್ಟರು. ಶಾಲಾ ವಿದ್ಯಾರ್ಥಿ ಶಿಕಿನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya
error: Content is protected !!