ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಮತ್ತು ಆಸ್ಪತ್ರೆ ಶಾಂತಿವನ ಇದರ ಉಪನ್ಯಾಸಕರು ಮತ್ತು ವೈದ್ಯಾಧಿಕಾರಿಗಳು ಆಗಿರುವ ಡಾ. ಪಕೃತಿ ಕೆದಿಲಾ ಇವರು ಆಗಮಿಸಿದ್ದರು. ಇವರು ವಿವಿಧ ಚಟುವಟಿಕೆಗಳ ಮುಖಾಂತರ ವಿಧ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ, ಯೋಜನೆ ,ಯೋಗ ಜ್ಞಾನ ಇತ್ಯಾದಿಗಳ ಕುರಿತು ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರು ಯುವಜನತೆಯಲ್ಲಿ ಇರಬೇಕಾದ ವಿಶೇಷ ಗುಣಗಳು, ಗುರಿ ತಲುಪುವ ಮಾರ್ಗಗಳು ಇತ್ಯಾದಿಗಳನ್ನು ವಿಧ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ವಿದ್ಯಾರ್ಥಿ ಸಾರ್ಥಕ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶ್ರವಣ್ ಸ್ವಾಗತಿಸಿ, ಕುಮಾರಿ ಯಜ್ಞ ಅತಿಥಿಗಳ ಕಿರು ಪರಿಚಯ ಮಾಡಿಕೊಟ್ಟರು. ಶಾಲಾ ವಿದ್ಯಾರ್ಥಿ ಶಿಕಿನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.











