September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಮತ್ತು ಆಸ್ಪತ್ರೆ ಶಾಂತಿವನ ಇದರ ಉಪನ್ಯಾಸಕರು ಮತ್ತು ವೈದ್ಯಾಧಿಕಾರಿಗಳು ಆಗಿರುವ ಡಾ. ಪಕೃತಿ ಕೆದಿಲಾ ಇವರು ಆಗಮಿಸಿದ್ದರು. ಇವರು ವಿವಿಧ ಚಟುವಟಿಕೆಗಳ ಮುಖಾಂತರ ವಿಧ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ, ಯೋಜನೆ ,ಯೋಗ ಜ್ಞಾನ ಇತ್ಯಾದಿಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರು ಯುವಜನತೆಯಲ್ಲಿ ಇರಬೇಕಾದ ವಿಶೇಷ ಗುಣಗಳು, ಗುರಿ ತಲುಪುವ ಮಾರ್ಗಗಳು ಇತ್ಯಾದಿಗಳನ್ನು ವಿಧ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ವಿದ್ಯಾರ್ಥಿ ಸಾರ್ಥಕ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶ್ರವಣ್ ಸ್ವಾಗತಿಸಿ, ಕುಮಾರಿ ಯಜ್ಞ ಅತಿಥಿಗಳ ಕಿರು ಪರಿಚಯ ಮಾಡಿಕೊಟ್ಟರು. ಶಾಲಾ ವಿದ್ಯಾರ್ಥಿ ಶಿಕಿನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya
error: Content is protected !!