22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆಯವರ ಸಹಕಾರದೊಂದಿಗೆ, ಯುವ ಉದ್ಯಮಿ ಹಾಗೂ ಸಾಮಾಜಿಕ ಸಂಘಟಕ, ಕೊಡುಗೈ ದಾನಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ ಅವರೇ ಈ ಮಾದರಿ ಕಾರ್ಯ ಮಾಡಿದವರು.

ಎಳೆಯ ಮಗುವಿನ ಲಿವರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಕಡಿರುದ್ಯಾವರದ ಹಿಂದೂ ಕುಟುಂಬವೊಂದಕ್ಕೆ, ಉಳಿದಂತೆ ವಿಕಲಚೇತನರಾಗಿ ಮಲಗಿದಲ್ಲೇ ಇರುವ ಬೆಳ್ತಂಗಡಿ ಸಂಜಯ ನಗರದ ಕುಟುಂಬವೊಂದಕ್ಕೆ, ಮೇಲಂತಬೆಟ್ಟು ಗ್ರಾಮದ ಇಬ್ಬರು ವಿಧವೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುತ್ತಿರುವ ಮುಸ್ಲಿಂ ಕುಟುಂಬಕ್ಕೆ ಶಮೀಮ್ ಅವರು ರೇಷನ್ ಕಿಟ್ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya
error: Content is protected !!