September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆಯವರ ಸಹಕಾರದೊಂದಿಗೆ, ಯುವ ಉದ್ಯಮಿ ಹಾಗೂ ಸಾಮಾಜಿಕ ಸಂಘಟಕ, ಕೊಡುಗೈ ದಾನಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ ಅವರೇ ಈ ಮಾದರಿ ಕಾರ್ಯ ಮಾಡಿದವರು.

ಎಳೆಯ ಮಗುವಿನ ಲಿವರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಕಡಿರುದ್ಯಾವರದ ಹಿಂದೂ ಕುಟುಂಬವೊಂದಕ್ಕೆ, ಉಳಿದಂತೆ ವಿಕಲಚೇತನರಾಗಿ ಮಲಗಿದಲ್ಲೇ ಇರುವ ಬೆಳ್ತಂಗಡಿ ಸಂಜಯ ನಗರದ ಕುಟುಂಬವೊಂದಕ್ಕೆ, ಮೇಲಂತಬೆಟ್ಟು ಗ್ರಾಮದ ಇಬ್ಬರು ವಿಧವೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುತ್ತಿರುವ ಮುಸ್ಲಿಂ ಕುಟುಂಬಕ್ಕೆ ಶಮೀಮ್ ಅವರು ರೇಷನ್ ಕಿಟ್ ಹಸ್ತಾಂತರಿಸಿದರು.

Related posts

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya
error: Content is protected !!