25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

ಅಳದಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬ್ರಹತ್ ಬ್ರಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣವು ಜ 29 ರಂದು ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಯು ಜ 11ರಂದು ನಡೆಯಿತು.

ಸಭೆಯಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ಡಾ.ಪ್ರದೀಪ್ ಎ ಅವರು ಸಹಸ್ರಾರು ಭಕ್ತಾದಿಗಳಿಂದ ಏಕ ಕಂಠದಲ್ಲಿ ಬೃಹತ್ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ.ಸಾತ್ವಿಕ ಚಿಂತನೆ ಉದ್ದೀಪನಗೊಳಿಸುವ ಈ ಕಾರ್ಯಕ್ರಮದಲ್ಲಿ ನಾವೆಲ್ಲರೂ ಜೊತೆಯಾಗಬೇಕೆಂದರು. ನಾವೂರಿನ ದೇವಸ್ಥಾನದಲ್ಲಿ ನಡೆಯುವ ಸತ್ ಚಿಂತನೆಯ ಕಾರ್ಯಯೋಜನೆಗಳು ಅಲ್ಲಿಗೆ ಮಾತ್ರ ಸೀಮಿತವಾಗದೆ ಇಡೀ ಸಮಾಜಕ್ಕೆ ತಲುಪಬೇಕು ಎಂದರು.

ವೇದಿಕೆಯಲ್ಲಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ್ ಡೋಂಗ್ರೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಯೋಜನಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.

ಸಭೆಯಲ್ಲಿ ಡಾ.ತುಳಪುಳೆ, ನಿತ್ಯಾನಂದ ನಾವರ, ನಿರಂಜನ್ ಜೋಶಿ, ಸತೀಶ್ ಪೂಜಾರಿ ನಮನ, ಮೋಹನ್ ದಾಸ್, ವಿಜಯ್ ನಾವರ, ಮಾಲಾ ಎಂ.ಕೆ, ಮಂಜುನಾಥ ಆಚಾರ್ಯ ಸೇರಿದಂತೆ ಯೋಜನೆಯ ಪದಾಧಿಕಾರಿಗಳು,ಊರವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Related posts

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!