23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

ಉಜಿರೆ, : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗು ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಗುಂಡೆಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಅನೀಶ ಇವರು ಇತ್ತೀಚೆಗೆ ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲೂ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು. ಈ ಮೊದಲು ಸುಳ್ಯ ತಾಲೂಕಿನ ಪಂಜ ದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಅತ್ಲೇಟಿಕ್ಸ್ ನಲ್ಲಿ 17 ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ಬೆಳ್ತಂಗಡಿ ತಾಲೂಕಿನ್ನು ಪ್ರತಿನಿಧಿಸಿ ಸುಮಾರು 11.43 ಮೀ ದೂರಕ್ಕೆ ಎಸೆದು ಕೂಟದಲ್ಲೇ ವಿನೂತನ ದಾಖಲೆಯನ್ನು ನಿರ್ಮಿಸಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆಯ ಕ್ಲೆಮೆಂಟ್ ಡಿಸೋಜಾ ಮತ್ತು ಆಶಾ ಡಿಸೋಜಾ ದಂಪತಿಗಳ ಮಗಳಾದ ಕುಮಾರಿ ಅನೀಶ ಡಿಸೋಜಾ ಕಳೆದ ಎರಡು ವರ್ಷ ಸತತ ವಾಗಿ ಜಾರ್ಖಂಡ್ ಹಾಗೂ ಲಕ್ನೋ ದಲ್ಲಿ ನಡೆದ ಅಂಡರ್ 14 ವಿಭಾಗದ ರಾಷ್ಟ್ರ ಮಟ್ಟದ ಗುಂಡು ಎಸೆತದಲ್ಲಿ ಭಾಗವಹಿಸಿ 4ನೇ ಸ್ಥಾನವನ್ನು ಪಡೆದಿರುತ್ತಾಳೆ. ಜೊತೆಗೆ ಎರಡು ಭಾರಿ ರಾಜ್ಯ ಮಟ್ಟದ ಚಕ್ರ ಎಸೆತದಲ್ಲಿ ಭಾಗವಹಿಸಿರುತ್ತಾರೆ.

ಪ್ರಶಸ್ತಿ ವಿಜೇತ ಕುಮಾರಿ ಅನೀಶರವರಿಗೆ ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ನೀಡಿರುತ್ತಾರೆ.

Related posts

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!