37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿತ್ತು.

ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡ ಬಳಿಕ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ವೇಣೂರ ಅರಣ್ಯ ಇಲಾಖೆಯ ನಯನಾಡ್ ನಲ್ಲಿರುವ ಗಸ್ತುವಲಯ ವಸತಿಗೃಹದ ಬಳಿ ಬಂಟ್ವಾಳ ಪಶುವೈದ್ಯರಾದ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಜ.11 ರಂದು ಚಿರತೆಯ ಶವಪರೀಕ್ಷೆ ಮಾಡಲಾಗಿದ್ದು. ಈ ವೇಳೆ ಚಿರತೆಯ ಕುತ್ತಿಗೆ ಭಾಗಕ್ಕೆ ಗಾಯಗಳ ಗುರುತು ಮತ್ತು ಹೊಟ್ಟೆಯಲ್ಲಿ ನಾಯಿ ಮಾಂಸ ಕೂಡ ಪತ್ತೆಯಾಗಿದೆ. ಶವಪರೀಕ್ಷೆ ನಡೆಸಿದ ಬಳಿಕ ಅಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಚಿರತೆಯನ್ನು ಎಸಿಎಫ್ ಶ್ರೀಧರ್.ಪಿ ನೇತೃತ್ವದಲ್ಲಿ ಕಾನೂನು ಪ್ರಕಾರ ದಹನ ಮಾಡಲಾಯಿತು.

ಚಿರತೆ ಕಾಡುಹಂದಿಗೆ ಇಟ್ಟ ಉರುಳಿಗೆ ಅಥವಾ ತಂತಿಬೇಲಿಗೆ ಸಿಕ್ಕಿಬಿದ್ದು ಗಾಯಗೊಂಡು ಬಳಿಕ ಮೃತಪಟ್ಟ ಶಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶವಪರೀಕ್ಷೆ ಮಾಡಿದ ಚಿರತೆಯ ವಿವಿಧ ಭಾಗಗಳನ್ನು ಸಾವಿನ ಬಗ್ಗೆ ದೃಢಪಡಿಸಲು ಹೈದರಾಬಾದ್ ಅಥವಾ ಬೆಂಗಳೂರು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಚಿರತೆಯ ಶವಪರೀಕ್ಷೆ ವೇಳೆ ಬಂಟ್ವಾಳ ಪಶುವೈದ್ಯ ಅಶೋಕ್ ಶೆಟ್ಟಿ ತಂಡ ಹಾಗೂ ಮೂಡಬಿದಿರೆ ಎಸಿಎಫ್ ಶ್ರೀಧರ್.ಪಿ, ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಹಾಗೂ ಇತರ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!