23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿತ್ತು.

ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡ ಬಳಿಕ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ವೇಣೂರ ಅರಣ್ಯ ಇಲಾಖೆಯ ನಯನಾಡ್ ನಲ್ಲಿರುವ ಗಸ್ತುವಲಯ ವಸತಿಗೃಹದ ಬಳಿ ಬಂಟ್ವಾಳ ಪಶುವೈದ್ಯರಾದ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಜ.11 ರಂದು ಚಿರತೆಯ ಶವಪರೀಕ್ಷೆ ಮಾಡಲಾಗಿದ್ದು. ಈ ವೇಳೆ ಚಿರತೆಯ ಕುತ್ತಿಗೆ ಭಾಗಕ್ಕೆ ಗಾಯಗಳ ಗುರುತು ಮತ್ತು ಹೊಟ್ಟೆಯಲ್ಲಿ ನಾಯಿ ಮಾಂಸ ಕೂಡ ಪತ್ತೆಯಾಗಿದೆ. ಶವಪರೀಕ್ಷೆ ನಡೆಸಿದ ಬಳಿಕ ಅಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಚಿರತೆಯನ್ನು ಎಸಿಎಫ್ ಶ್ರೀಧರ್.ಪಿ ನೇತೃತ್ವದಲ್ಲಿ ಕಾನೂನು ಪ್ರಕಾರ ದಹನ ಮಾಡಲಾಯಿತು.

ಚಿರತೆ ಕಾಡುಹಂದಿಗೆ ಇಟ್ಟ ಉರುಳಿಗೆ ಅಥವಾ ತಂತಿಬೇಲಿಗೆ ಸಿಕ್ಕಿಬಿದ್ದು ಗಾಯಗೊಂಡು ಬಳಿಕ ಮೃತಪಟ್ಟ ಶಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶವಪರೀಕ್ಷೆ ಮಾಡಿದ ಚಿರತೆಯ ವಿವಿಧ ಭಾಗಗಳನ್ನು ಸಾವಿನ ಬಗ್ಗೆ ದೃಢಪಡಿಸಲು ಹೈದರಾಬಾದ್ ಅಥವಾ ಬೆಂಗಳೂರು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಚಿರತೆಯ ಶವಪರೀಕ್ಷೆ ವೇಳೆ ಬಂಟ್ವಾಳ ಪಶುವೈದ್ಯ ಅಶೋಕ್ ಶೆಟ್ಟಿ ತಂಡ ಹಾಗೂ ಮೂಡಬಿದಿರೆ ಎಸಿಎಫ್ ಶ್ರೀಧರ್.ಪಿ, ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಹಾಗೂ ಇತರ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya
error: Content is protected !!