March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಮತ್ತು ಆಸ್ಪತ್ರೆ ಶಾಂತಿವನ ಇದರ ಉಪನ್ಯಾಸಕರು ಮತ್ತು ವೈದ್ಯಾಧಿಕಾರಿಗಳು ಆಗಿರುವ ಡಾ. ಪಕೃತಿ ಕೆದಿಲಾ ಇವರು ಆಗಮಿಸಿದ್ದರು. ಇವರು ವಿವಿಧ ಚಟುವಟಿಕೆಗಳ ಮುಖಾಂತರ ವಿಧ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ, ಯೋಜನೆ ,ಯೋಗ ಜ್ಞಾನ ಇತ್ಯಾದಿಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರು ಯುವಜನತೆಯಲ್ಲಿ ಇರಬೇಕಾದ ವಿಶೇಷ ಗುಣಗಳು, ಗುರಿ ತಲುಪುವ ಮಾರ್ಗಗಳು ಇತ್ಯಾದಿಗಳನ್ನು ವಿಧ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ವಿದ್ಯಾರ್ಥಿ ಸಾರ್ಥಕ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶ್ರವಣ್ ಸ್ವಾಗತಿಸಿ, ಕುಮಾರಿ ಯಜ್ಞ ಅತಿಥಿಗಳ ಕಿರು ಪರಿಚಯ ಮಾಡಿಕೊಟ್ಟರು. ಶಾಲಾ ವಿದ್ಯಾರ್ಥಿ ಶಿಕಿನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
error: Content is protected !!