September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.

ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.


ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.

Related posts

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya
error: Content is protected !!