September 6, 2026
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಬೆಳ್ತಂಗಡಿ: ವಿಪರೀತ ಸಾಲಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೇರ್ಹಳ್ಳಿ ಗ್ರಾಮದ ಅಭಿಷೇಕ್ (31) ಎಂಬಾತ ವಿಪರೀತ ಸಾಲ ಮಾಡಿಕೊಂಡ ಪರಿಣಾಮ ನೊಂದು ಮನೆಯಿಂದ ನಾಪತ್ತೆಯಾದವನು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಕಲೇಶಪುರ ನಿವಾಸದಿಂದ ಅಭಿಷೇಕ್ ಜ.9 ಕ್ಕೆ ನಾಪತ್ತೆಯಾಗಿ ನೇರ ಧರ್ಮಸ್ಥಳದ ನೇತ್ರಾವತಿ ನದಿಗೆ ಬಂದು ಮನೆಯವರಿಗೆ ‘ನನಗೆ ಸಾಲದ ಒತ್ತಡ ಜಾಸ್ತಿಯಾಗುತ್ತಿರುವ ಕಾರಣದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ’ ಮೆಸೇಜ್ ಮಾಡಿ ಬಳಿಕ ಕರೆ ಮೂಲಕ ‘ನಾನು ಧರ್ಮಸ್ಥಳದ ನೇತ್ರಾವತಿ ನದಿ ಬಳಿ ಬಂದಿದ್ದು ನಾನು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ.

ಈ ವಿಚಾರವಾಗಿ ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಮನೆಯವರು ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ನೇರ ಧರ್ಮಸ್ಥಳಕ್ಕೆ ಬಂದು ನೇತ್ರಾವತಿ ನದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಜ.11 ರಂದು ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಅಭಿಷೇಕ್ ಮೃತದೇಹ ಕುಟುಂಬ ಸದಸ್ಯರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಹೋದರ ಭರತ್.ಬಿ.ಎಮ್ ಎಂಬವರು ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಪಟ್ರಮೆ ಒಕ್ಕೂಟದ ವತಿಯಿಂದ ಪಟ್ರಮೆ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!