September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು.

ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ ನೀಡಿದರು. ಅಲ್ಲದೆ ಬೆಳ್ತಂಗಡಿ ನಗರಗಳಲ್ಲಿ ಜಾಥದ ಮೂಲಕ ಘೋಷಣೆಗಳೊಂದಿಗೆ ಸಂಚರಿಸುತ್ತ ನಾಗರಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಮ್ ಆರ್ ಉಪಸ್ಥಿತರಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಕಾರ್ಯಕ್ರಮ ಸಂಘಟಿಸಿ ಸ್ವಾಗತಿಸಿ ವಂದಿಸಿದರು. ಸ್ಕೌಟ್ಸ್ ಶಿಕ್ಷಕಿಯರಾದ ಕಾರುಣ್ಯ ,ಪ್ರಮೀಳ ಎನ್, ಮಂಜುನಾಥ್, ಜಯರಾಮ್, ನೀತಾ ಕೆ ಎಸ್, ಜಯಲಕ್ಷ್ಮಿ, ಅಮಿತಾ, ಸೌಮ್ಯ ಪಿ, ಮೋಹಿನಿ, ಪುಷ್ಪಲತಾ ಗೀತಾ ಪಿ ರವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!