22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಕುಂಡದಬೆಟ್ಟು ಹಿಂದೂ ಸಂಗಮ ಆಯೋಜನಾ ಸಮಿತಿ ಪಡಂಗಡಿ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸ್ವಯಂ ಸೇವಕ ಮಲ್ಲಿನಾಥ ರವರು ಜ.12ರಂದು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಫೆ.1ರಂದು ಅಪರಾಹ್ನ ಗಂಟೆ 3.00 ಕ್ಕೆ ಹಿಂದೂ ಸಂಗಮ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಲಿದೆ. ಶೋಭಾಯಾತ್ರೆಯು ಗೋಳಿಯಂಗಡಿ ಎಸ್.ಡಿ.ಎಂ. ಐಟಿಐ ನಿಂದ ಮಂಜುಶ್ರೀ ಭಜನಾ ಮಂದಿರದವರೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ದ.ಕ.ಜಿಲ್ಲಾ ಪರವನ್ ಸಂಘ ಉಪಾಧ್ಯಕ್ಷ ಎಚ್. ಪದ್ಮ ಹಚ್ಚೇವುಪಲ್ಕೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ವೈ ಈಶ್ವರ ಭಟ್ , ಸೋಮನಾಥ ಕೆವೈ , ಶಿವಾನಂದ, ಸಂತೋಷ್ ಜೈನ್, ಪ್ರಕಾಶ ಪುರೋಹಿತ್, ಸಂತೋಷ್ ಜೈನ್ ಪಡಂಗಡಿ, ರತ್ನಾಕರ ಬರ್ಕರೆ, ಅನಿಲ್ ಹೆಗ್ಡೆ ಪಡಂಗಡಿ, ಮಂಡಲದ ಹಿಂದೂ ಸಂಘ ಸಮಿತಿ ಅಧ್ಯಕ್ಷ ಪ್ರಸನ್ನ ಹೆಬ್ಬಾರ್, ಆನಂದ ಎನ್, ರವಿ ಭಟ್, ರೋಹಿತ್ ಸಂಬಿಬೆಟ್ಟ, ದಿನಕರ ಕುಲಾಲ್, , ಶೀನ ಪೂಜಾರಿ, ಧರ್ಣಪ್ಪ , ಭರತ್ ರಾಜ್ ಆಮೈ, ನಿರಂಜನ ಪಾರೊಟ್ಟು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya
error: Content is protected !!