ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಗುರುದೇವ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಡಕ್ಷನ್ ಕಾರ್ಯಕ್ರಮ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya
error: Content is protected !!