23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!