23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!