23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!