September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya
error: Content is protected !!