23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದಲ್ಲಿ ನೋಂದಾವಣೆಗೊಂಡಿರುವ ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘ ಕಡಬ ಇದರ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಅಶ್ರಫ್ ಆಲಿಕುಂಞಿ ಮುಂಡಾಜೆ ಆಯ್ಕೆಯಾಗಿದ್ದಾರೆ.

ಸಂಘದ ಬೈಲಾದಲ್ಲಿ ನಮೂದಿಸಿದ 53/1 ರ ಪ್ರಕಾರ ಖಾಲಿಯಾದ ಹಿಂದುಳಿದ ವರ್ಗ ಸ್ಥಾನಕ್ಕೆ ನಿರ್ದೇಶಕರಾಗಿ ಆಯ್ಕೆ ಮಾಡಿದ ಬಗ್ಗೆ ಅಧಿಕೃತ ಆದೇಶ ಬಿಡುಗಡೆಗೊಂಡಿದೆ.‌ ಇದರ ಜೊತೆಗೆ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಎಲ್ಲಾ ವ್ಯವಹಾರವನ್ನೂ ನೋಡಿಕೊಳ್ಳುವಂತೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಸೌಭಾಗ್ಯ ಸೊಸೈಟಿಯು ಕಡಬದಲ್ಲಿ‌ ಕೇಂದ್ರ ಕಚೇರಿ ಹೊಂದಿದ್ದು, ಸುಳ್ಯ, ಕೊಡಗಿನ ವಿರಾಜಪೇಟೆ ಹಾಗೂ ಕಳೆದ 11 ತಿಂಗಳಿನಿಂದ ಬೆಳ್ತಂಗಡಿಯಲ್ಲೂ ಶಾಖೆ ಹೊಂದಿ ತಾ.ಪಂ ಕಚೇರಿ‌ ಬಳಿ ಕಾರ್ಯನಿರ್ವಹಿಸುತ್ತಿದೆ.
ವಿಕಲ ಚೇತನರಿಗಾಗಿಯೇ ಇರುವ ಈ ಸಂಸ್ಥೆಯಲ್ಲಿ ಇತರರಿಗೂ ಹಣಕಾಸು ವ್ಯವಹಾರದ ಅವಕಾಶಗಳನ್ನು ಒದಗಿಸುತ್ತಿದೆ.

ಕಳೆದ 26 ವರ್ಷಗಳಿಂದ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ, ಜನಜಾಗೃತಿ ವೇದಿಕೆಯ ವ್ಯಸನಮುಕ್ತ ಅಭಿಯಾನದ ಸಂಪನ್ಮೂಲ ವ್ಯಕ್ತಿಯಾಗಿ, ಅತ್ಯುತ್ತಮ ಕಾರ್ಯಕ್ರಮ ಉದ್ಘೋಷಕರಾಗಿ, ವಾಗ್ಮಿಗಳಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ನೋಂದಾಯಿತಗೊಂಡಿರುವ “ತಮನ್ನಾ ಹೋಮ್ ಸ್ಟೇ” ಎಂಬ ಉದ್ಯಮವನ್ನೂ ಕೂಡ ಬೆಳ್ತಂಗಡಿ ನಗರದಲ್ಲಿ ನಡೆಸಿಕೊಂಡು‌ ಬರುತ್ತಿದ್ದಾರೆ.
ಸಾಮಾಜಿಕ ಸಂಘಟನೆಗಳಾದ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ತಾ. ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!