ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದಲ್ಲಿ ನೋಂದಾವಣೆಗೊಂಡಿರುವ ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘ ಕಡಬ ಇದರ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಅಶ್ರಫ್ ಆಲಿಕುಂಞಿ ಮುಂಡಾಜೆ ಆಯ್ಕೆಯಾಗಿದ್ದಾರೆ.

ಸಂಘದ ಬೈಲಾದಲ್ಲಿ ನಮೂದಿಸಿದ 53/1 ರ ಪ್ರಕಾರ ಖಾಲಿಯಾದ ಹಿಂದುಳಿದ ವರ್ಗ ಸ್ಥಾನಕ್ಕೆ ನಿರ್ದೇಶಕರಾಗಿ ಆಯ್ಕೆ ಮಾಡಿದ ಬಗ್ಗೆ ಅಧಿಕೃತ ಆದೇಶ ಬಿಡುಗಡೆಗೊಂಡಿದೆ.‌ ಇದರ ಜೊತೆಗೆ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಎಲ್ಲಾ ವ್ಯವಹಾರವನ್ನೂ ನೋಡಿಕೊಳ್ಳುವಂತೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಸೌಭಾಗ್ಯ ಸೊಸೈಟಿಯು ಕಡಬದಲ್ಲಿ‌ ಕೇಂದ್ರ ಕಚೇರಿ ಹೊಂದಿದ್ದು, ಸುಳ್ಯ, ಕೊಡಗಿನ ವಿರಾಜಪೇಟೆ ಹಾಗೂ ಕಳೆದ 11 ತಿಂಗಳಿನಿಂದ ಬೆಳ್ತಂಗಡಿಯಲ್ಲೂ ಶಾಖೆ ಹೊಂದಿ ತಾ.ಪಂ ಕಚೇರಿ‌ ಬಳಿ ಕಾರ್ಯನಿರ್ವಹಿಸುತ್ತಿದೆ.
ವಿಕಲ ಚೇತನರಿಗಾಗಿಯೇ ಇರುವ ಈ ಸಂಸ್ಥೆಯಲ್ಲಿ ಇತರರಿಗೂ ಹಣಕಾಸು ವ್ಯವಹಾರದ ಅವಕಾಶಗಳನ್ನು ಒದಗಿಸುತ್ತಿದೆ.

ಕಳೆದ 26 ವರ್ಷಗಳಿಂದ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ, ಜನಜಾಗೃತಿ ವೇದಿಕೆಯ ವ್ಯಸನಮುಕ್ತ ಅಭಿಯಾನದ ಸಂಪನ್ಮೂಲ ವ್ಯಕ್ತಿಯಾಗಿ, ಅತ್ಯುತ್ತಮ ಕಾರ್ಯಕ್ರಮ ಉದ್ಘೋಷಕರಾಗಿ, ವಾಗ್ಮಿಗಳಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ನೋಂದಾಯಿತಗೊಂಡಿರುವ “ತಮನ್ನಾ ಹೋಮ್ ಸ್ಟೇ” ಎಂಬ ಉದ್ಯಮವನ್ನೂ ಕೂಡ ಬೆಳ್ತಂಗಡಿ ನಗರದಲ್ಲಿ ನಡೆಸಿಕೊಂಡು‌ ಬರುತ್ತಿದ್ದಾರೆ.
ಸಾಮಾಜಿಕ ಸಂಘಟನೆಗಳಾದ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ತಾ. ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!