22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು.

ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ ನೀಡಿದರು. ಅಲ್ಲದೆ ಬೆಳ್ತಂಗಡಿ ನಗರಗಳಲ್ಲಿ ಜಾಥದ ಮೂಲಕ ಘೋಷಣೆಗಳೊಂದಿಗೆ ಸಂಚರಿಸುತ್ತ ನಾಗರಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಮ್ ಆರ್ ಉಪಸ್ಥಿತರಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಕಾರ್ಯಕ್ರಮ ಸಂಘಟಿಸಿ ಸ್ವಾಗತಿಸಿ ವಂದಿಸಿದರು. ಸ್ಕೌಟ್ಸ್ ಶಿಕ್ಷಕಿಯರಾದ ಕಾರುಣ್ಯ ,ಪ್ರಮೀಳ ಎನ್, ಮಂಜುನಾಥ್, ಜಯರಾಮ್, ನೀತಾ ಕೆ ಎಸ್, ಜಯಲಕ್ಷ್ಮಿ, ಅಮಿತಾ, ಸೌಮ್ಯ ಪಿ, ಮೋಹಿನಿ, ಪುಷ್ಪಲತಾ ಗೀತಾ ಪಿ ರವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.

Related posts

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!