September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು.

ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ ನೀಡಿದರು. ಅಲ್ಲದೆ ಬೆಳ್ತಂಗಡಿ ನಗರಗಳಲ್ಲಿ ಜಾಥದ ಮೂಲಕ ಘೋಷಣೆಗಳೊಂದಿಗೆ ಸಂಚರಿಸುತ್ತ ನಾಗರಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಮ್ ಆರ್ ಉಪಸ್ಥಿತರಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಕಾರ್ಯಕ್ರಮ ಸಂಘಟಿಸಿ ಸ್ವಾಗತಿಸಿ ವಂದಿಸಿದರು. ಸ್ಕೌಟ್ಸ್ ಶಿಕ್ಷಕಿಯರಾದ ಕಾರುಣ್ಯ ,ಪ್ರಮೀಳ ಎನ್, ಮಂಜುನಾಥ್, ಜಯರಾಮ್, ನೀತಾ ಕೆ ಎಸ್, ಜಯಲಕ್ಷ್ಮಿ, ಅಮಿತಾ, ಸೌಮ್ಯ ಪಿ, ಮೋಹಿನಿ, ಪುಷ್ಪಲತಾ ಗೀತಾ ಪಿ ರವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya
error: Content is protected !!