ಪಡಂಗಡಿ: ಕುಂಡದಬೆಟ್ಟು ಹಿಂದೂ ಸಂಗಮ ಆಯೋಜನಾ ಸಮಿತಿ ಪಡಂಗಡಿ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸ್ವಯಂ ಸೇವಕ ಮಲ್ಲಿನಾಥ ರವರು ಜ.12ರಂದು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಫೆ.1ರಂದು ಅಪರಾಹ್ನ ಗಂಟೆ 3.00 ಕ್ಕೆ ಹಿಂದೂ ಸಂಗಮ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಲಿದೆ. ಶೋಭಾಯಾತ್ರೆಯು ಗೋಳಿಯಂಗಡಿ ಎಸ್.ಡಿ.ಎಂ. ಐಟಿಐ ನಿಂದ ಮಂಜುಶ್ರೀ ಭಜನಾ ಮಂದಿರದವರೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ದ.ಕ.ಜಿಲ್ಲಾ ಪರವನ್ ಸಂಘ ಉಪಾಧ್ಯಕ್ಷ ಎಚ್. ಪದ್ಮ ಹಚ್ಚೇವುಪಲ್ಕೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ವೈ ಈಶ್ವರ ಭಟ್ , ಸೋಮನಾಥ ಕೆವೈ , ಶಿವಾನಂದ, ಸಂತೋಷ್ ಜೈನ್, ಪ್ರಕಾಶ ಪುರೋಹಿತ್, ಸಂತೋಷ್ ಜೈನ್ ಪಡಂಗಡಿ, ರತ್ನಾಕರ ಬರ್ಕರೆ, ಅನಿಲ್ ಹೆಗ್ಡೆ ಪಡಂಗಡಿ, ಮಂಡಲದ ಹಿಂದೂ ಸಂಘ ಸಮಿತಿ ಅಧ್ಯಕ್ಷ ಪ್ರಸನ್ನ ಹೆಬ್ಬಾರ್, ಆನಂದ ಎನ್, ರವಿ ಭಟ್, ರೋಹಿತ್ ಸಂಬಿಬೆಟ್ಟ, ದಿನಕರ ಕುಲಾಲ್, , ಶೀನ ಪೂಜಾರಿ, ಧರ್ಣಪ್ಪ , ಭರತ್ ರಾಜ್ ಆಮೈ, ನಿರಂಜನ ಪಾರೊಟ್ಟು ಉಪಸ್ಥಿತರಿದ್ದರು.











