38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!