July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya
error: Content is protected !!