July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

ಬೆಳ್ತಂಗಡಿ: ಅಮೆರಿಕಾದ ಫ್ಲೋರಿಡಾದ ಯೋಗ ಯುನಿವರ್ಸಿಟಿಯಿಂದ ಉಪವಾಸ ಮತ್ತು ಆಧ್ಯಾತ್ಮಿಕ ಪ್ರಗತಿ ಎಂಬ ವಿಷಯದ ಮೇಲೆ ಮಹಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಪಡೆದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಡಾ.ಯೋಗಿಂದ್ರ ಭಟ್ ಇವರಿಗೆ ಬಾರ್ಯ ಶ್ರೀ ಮಹಾ ವಿಷ್ಣು ದೇವಸ್ಥಾನದ ವಠಾರದಲ್ಲಿ ಇಂಜಿನಿಯರ್ ಯಜ್ಞೇಶ್ ಪುತ್ತಿಲ ನೇತೃತ್ವದಲ್ಲಿ ಅಭಿನಂದನಾ ಸಮಾರಂಭವು ಜರಗಿತು.

ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆ ವಹಿಸಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಪುರುಷೋತ್ತಮ ಭಂಡಾರಿ ಮಂಗಳೂರು ಸುದೇಶ್ ರೈ ಮಂಗಳೂರು, ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ, ಸೂರ್ಯನಾರಾಯಣ ಕುದ್ದಣ್ಣಾಯ, ಸೇಸಪ್ಪ ಸಾಲಿಯನ್, ಕುಶಾಲಪ್ಪ ಗೌಡ, ವಿಠಲದಾಸ ಕಲ್ಲೂರಾಯ,ಸುಬ್ರಹ್ಮಣ್ಯ ಬಾರಿತ್ತಾಯ, ದಾಮೋದರ ನಾಯಕ್, ಮನೋಹರ ಶೆಟ್ಟಿ ಮತ್ತು ಯೋಗೇಂದ್ರ ಭಟ್ಟರ ಅಭಿಮಾನಿ ಬಳಗದವರು ಹಾಗೂ ಆಡಳಿತ ಸೇವಾ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು

ಆಮಂತ್ರಣ ಪತ್ರಿಕೆ ಬಿಡುಗಡೆ
ಈ ಸಂದರ್ಭದಲ್ಲಿ ಫೆಬ್ರವರಿ 6,7ರಂದು ಜರಗಲಿರುವ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಡಾ. ಯೋಗಿಂದ್ರ ಭಟ್ ಬಿಡುಗಡೆಗೊಳಿಸಿದರು.
ಕುಮಾರಿ ಪುಷ್ಪ ಪ್ರಸನ್ನ ಪ್ರಾರ್ಥಿಸಿದರು. ರಾಜೇಶ್ ರೈ ಹೆನ್ನಡ್ಕ ಸ್ವಾಗತಿಸಿ ಪ್ರವೀಣ್ ಎಂ ಬಾರ್ಯ ವಂದಿಸಿದರು. ದಿನೇಶ್ ಮತ್ತು ಸಂದೇಶ್ ಆಗ್ಫಲ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya
error: Content is protected !!