ಮಡಂತ್ಯಾರು : ಗ್ರಾಮಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.
ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.











