ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ: ಯುವಶಕ್ತಿ ರಾಷ್ಟ್ರದ ಭವಿಷ್ಯವಾಗಿದ್ದು, ಆ ಭವಿಷ್ಯವನ್ನು ಸದೃಢ ಚಿಂತನೆ, ಶಿಸ್ತು ಮತ್ತು ಸೇವಾಭಾವದಿಂದ ರೂಪಿಸುವ ಉದ್ದೇಶದಿಂದ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು (SDMCNYS), ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. “ಆತ್ಮವನ್ನು ಬೆಳಗಿಸಿ ಜಗತ್ತನ್ನು ಪ್ರಭಾವಿಸಿ” ಎಂಬ ಥೀಮ್ನೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮದಿನದ ಸ್ಮರಣಾರ್ಥವಾಗಿ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಮ್ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ SDMCNYS ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಅತ್ಯಂತ ನಿರ್ಣಾಯಕವಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಸ್ವವಿಕಾಸ ಮತ್ತು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ಯುವಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡುವುದರ ಜೊತೆಗೆ ಮಾನವೀಯ ಮೌಲ್ಯಗಳು, ದಯೆ ಮತ್ತು ವಿನಯವನ್ನು ಬೆಳೆಸಿಕೊಳ್ಳುವುದು ಸಮಗ್ರ ಅಭಿವೃದ್ಧಿಗೆ ಅಗತ್ಯವೆಂದು ಅಭಿಪ್ರಾಯಪಟ್ಟರು.

ಅಧ್ಯಕ್ಷೀಯ ಭಾಷಣದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರು ಸ್ವಾಮಿ ವಿವೇಕಾನಂದರ ಜೀವನ ಮತ್ತು ಆದರ್ಶಗಳನ್ನು ಸ್ಮರಿಸಿ, ಯುವಕರು ಆತ್ಮವಿಶ್ವಾಸ, ಶಿಸ್ತು ಮತ್ತು ಉನ್ನತ ಗುರಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿರುವ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖಿ ಸೇವೆ, ನಿಸ್ವಾರ್ಥ ಸಮರ್ಪಣೆ ಮತ್ತು ಶಿಸ್ತುಬದ್ಧ ಜೀವನ ಯುವ ಪೀಳಿಗೆಗೆ ಮಹತ್ತರ ಪ್ರೇರಣೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿ ಸ್ವರೂಪ್ ಅವರು ಸ್ವಾಮಿ ವಿವೇಕಾನಂದರ ನೇರ ಚಿತ್ರಕಲೆಯನ್ನು (ಲೈವ್ ಪೇಂಟಿಂಗ್) ಪ್ರದರ್ಶಿಸಿ, ಎಲ್ಲರ ಗಮನ ಸೆಳೆದರು. ಬಳಿಕ ಶಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ನೀಡಿದ ವಿಶ್ವವಿಖ್ಯಾತ ಭಾಷಣದ ದೃಶ್ಯ ಪ್ರದರ್ಶನ ನಡೆಯಿತು. ಈ ಭಾಷಣವು ಯುವ ಮನಸ್ಸುಗಳಲ್ಲಿ ಆತ್ಮವಿಶ್ವಾಸ, ರಾಷ್ಟ್ರಪ್ರೇಮ ಹಾಗೂ ಉನ್ನತ ಚಿಂತನೆಗಳನ್ನು ಪುನರ್ಜಾಗೃತಗೊಳಿಸಿತು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಎನ್.ಎಸ್.ಎಸ್ ಅಧಿಕಾರಿ ಡಾ. ಶಾಲ್ಮಲಿ ಸುನಿಲ್ ಸ್ವಾಗತಿಸಿದರು. ಧರ್ಮೇಂದ್ರ ಕುಮಾರ್ ಅವರು ವಂದಿಸಿ. ಲಹರಿ ಹಾಗೂ ಪೂಜಾ ಅನೇಹೊಸೂರು ಅವರು ಕಾರ್ಯಕ್ರಮದ ನಿರೂಪಿಸಿದರು.

Related posts

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!