26.2 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದಲ್ಲಿ ನೋಂದಾವಣೆಗೊಂಡಿರುವ ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘ ಕಡಬ ಇದರ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಅಶ್ರಫ್ ಆಲಿಕುಂಞಿ ಮುಂಡಾಜೆ ಆಯ್ಕೆಯಾಗಿದ್ದಾರೆ.

ಸಂಘದ ಬೈಲಾದಲ್ಲಿ ನಮೂದಿಸಿದ 53/1 ರ ಪ್ರಕಾರ ಖಾಲಿಯಾದ ಹಿಂದುಳಿದ ವರ್ಗ ಸ್ಥಾನಕ್ಕೆ ನಿರ್ದೇಶಕರಾಗಿ ಆಯ್ಕೆ ಮಾಡಿದ ಬಗ್ಗೆ ಅಧಿಕೃತ ಆದೇಶ ಬಿಡುಗಡೆಗೊಂಡಿದೆ.‌ ಇದರ ಜೊತೆಗೆ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಎಲ್ಲಾ ವ್ಯವಹಾರವನ್ನೂ ನೋಡಿಕೊಳ್ಳುವಂತೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಸೌಭಾಗ್ಯ ಸೊಸೈಟಿಯು ಕಡಬದಲ್ಲಿ‌ ಕೇಂದ್ರ ಕಚೇರಿ ಹೊಂದಿದ್ದು, ಸುಳ್ಯ, ಕೊಡಗಿನ ವಿರಾಜಪೇಟೆ ಹಾಗೂ ಕಳೆದ 11 ತಿಂಗಳಿನಿಂದ ಬೆಳ್ತಂಗಡಿಯಲ್ಲೂ ಶಾಖೆ ಹೊಂದಿ ತಾ.ಪಂ ಕಚೇರಿ‌ ಬಳಿ ಕಾರ್ಯನಿರ್ವಹಿಸುತ್ತಿದೆ.
ವಿಕಲ ಚೇತನರಿಗಾಗಿಯೇ ಇರುವ ಈ ಸಂಸ್ಥೆಯಲ್ಲಿ ಇತರರಿಗೂ ಹಣಕಾಸು ವ್ಯವಹಾರದ ಅವಕಾಶಗಳನ್ನು ಒದಗಿಸುತ್ತಿದೆ.

ಕಳೆದ 26 ವರ್ಷಗಳಿಂದ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ, ಜನಜಾಗೃತಿ ವೇದಿಕೆಯ ವ್ಯಸನಮುಕ್ತ ಅಭಿಯಾನದ ಸಂಪನ್ಮೂಲ ವ್ಯಕ್ತಿಯಾಗಿ, ಅತ್ಯುತ್ತಮ ಕಾರ್ಯಕ್ರಮ ಉದ್ಘೋಷಕರಾಗಿ, ವಾಗ್ಮಿಗಳಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ನೋಂದಾಯಿತಗೊಂಡಿರುವ “ತಮನ್ನಾ ಹೋಮ್ ಸ್ಟೇ” ಎಂಬ ಉದ್ಯಮವನ್ನೂ ಕೂಡ ಬೆಳ್ತಂಗಡಿ ನಗರದಲ್ಲಿ ನಡೆಸಿಕೊಂಡು‌ ಬರುತ್ತಿದ್ದಾರೆ.
ಸಾಮಾಜಿಕ ಸಂಘಟನೆಗಳಾದ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ತಾ. ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!