25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದಲ್ಲಿ ನೋಂದಾವಣೆಗೊಂಡಿರುವ ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘ ಕಡಬ ಇದರ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಅಶ್ರಫ್ ಆಲಿಕುಂಞಿ ಮುಂಡಾಜೆ ಆಯ್ಕೆಯಾಗಿದ್ದಾರೆ.

ಸಂಘದ ಬೈಲಾದಲ್ಲಿ ನಮೂದಿಸಿದ 53/1 ರ ಪ್ರಕಾರ ಖಾಲಿಯಾದ ಹಿಂದುಳಿದ ವರ್ಗ ಸ್ಥಾನಕ್ಕೆ ನಿರ್ದೇಶಕರಾಗಿ ಆಯ್ಕೆ ಮಾಡಿದ ಬಗ್ಗೆ ಅಧಿಕೃತ ಆದೇಶ ಬಿಡುಗಡೆಗೊಂಡಿದೆ.‌ ಇದರ ಜೊತೆಗೆ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಎಲ್ಲಾ ವ್ಯವಹಾರವನ್ನೂ ನೋಡಿಕೊಳ್ಳುವಂತೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಸೌಭಾಗ್ಯ ಸೊಸೈಟಿಯು ಕಡಬದಲ್ಲಿ‌ ಕೇಂದ್ರ ಕಚೇರಿ ಹೊಂದಿದ್ದು, ಸುಳ್ಯ, ಕೊಡಗಿನ ವಿರಾಜಪೇಟೆ ಹಾಗೂ ಕಳೆದ 11 ತಿಂಗಳಿನಿಂದ ಬೆಳ್ತಂಗಡಿಯಲ್ಲೂ ಶಾಖೆ ಹೊಂದಿ ತಾ.ಪಂ ಕಚೇರಿ‌ ಬಳಿ ಕಾರ್ಯನಿರ್ವಹಿಸುತ್ತಿದೆ.
ವಿಕಲ ಚೇತನರಿಗಾಗಿಯೇ ಇರುವ ಈ ಸಂಸ್ಥೆಯಲ್ಲಿ ಇತರರಿಗೂ ಹಣಕಾಸು ವ್ಯವಹಾರದ ಅವಕಾಶಗಳನ್ನು ಒದಗಿಸುತ್ತಿದೆ.

ಕಳೆದ 26 ವರ್ಷಗಳಿಂದ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ, ಜನಜಾಗೃತಿ ವೇದಿಕೆಯ ವ್ಯಸನಮುಕ್ತ ಅಭಿಯಾನದ ಸಂಪನ್ಮೂಲ ವ್ಯಕ್ತಿಯಾಗಿ, ಅತ್ಯುತ್ತಮ ಕಾರ್ಯಕ್ರಮ ಉದ್ಘೋಷಕರಾಗಿ, ವಾಗ್ಮಿಗಳಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ನೋಂದಾಯಿತಗೊಂಡಿರುವ “ತಮನ್ನಾ ಹೋಮ್ ಸ್ಟೇ” ಎಂಬ ಉದ್ಯಮವನ್ನೂ ಕೂಡ ಬೆಳ್ತಂಗಡಿ ನಗರದಲ್ಲಿ ನಡೆಸಿಕೊಂಡು‌ ಬರುತ್ತಿದ್ದಾರೆ.
ಸಾಮಾಜಿಕ ಸಂಘಟನೆಗಳಾದ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ತಾ. ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!