July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು.

ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ ನೀಡಿದರು. ಅಲ್ಲದೆ ಬೆಳ್ತಂಗಡಿ ನಗರಗಳಲ್ಲಿ ಜಾಥದ ಮೂಲಕ ಘೋಷಣೆಗಳೊಂದಿಗೆ ಸಂಚರಿಸುತ್ತ ನಾಗರಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಮ್ ಆರ್ ಉಪಸ್ಥಿತರಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ಕಾರ್ಯಕ್ರಮ ಸಂಘಟಿಸಿ ಸ್ವಾಗತಿಸಿ ವಂದಿಸಿದರು. ಸ್ಕೌಟ್ಸ್ ಶಿಕ್ಷಕಿಯರಾದ ಕಾರುಣ್ಯ ,ಪ್ರಮೀಳ ಎನ್, ಮಂಜುನಾಥ್, ಜಯರಾಮ್, ನೀತಾ ಕೆ ಎಸ್, ಜಯಲಕ್ಷ್ಮಿ, ಅಮಿತಾ, ಸೌಮ್ಯ ಪಿ, ಮೋಹಿನಿ, ಪುಷ್ಪಲತಾ ಗೀತಾ ಪಿ ರವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.

Related posts

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!