September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಕ್ರೀಡಾಕೂಟವು ಜ.11ರಂದು ದೇಲೋಡಿ, ವಾರಿಜಾ ಹೊನ್ನಪ್ಪ ಗೌಡರ ಮನೆಯಲ್ಲಿ ಜರುಗಿತು.

ಕ್ರೀಡಾ ಕೂಟವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜಾಹ್ನವಿ ಪೂರ್ಯಳ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಹರೀಶ್ ಗೌಡ ಪರಪಾಜೆ ಭಾಗವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿಜಯ ಕುಮಾರ್ ಎಂ. ವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಯುವ ವೇದಿಕೆ ಅಧ್ಯಕ್ಷ ಅಜಿತ್ ಬಜಿಲ, ಮಹಿಳಾ ವೇದಿಕೆ ಅಧ್ಯಕ್ಷೆ ವನಿತಾ ಕಡಮಾಜೆ, ದೇಲೋಡಿ ಮನೆಯ ಯಜಮಾನರಾದ ಹೊನ್ನಪ್ಪ ಗೌಡ, ಕೊಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಯಾಮಣಿ, ಉಪಸ್ಥಿತರಿದ್ದರು.

ಒಲುಮೆ ರವರ ಪ್ರಾರ್ಥನೆಯ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ನವೀನ್ ಗೌಡ ವಾದ್ಯಕೋಡಿ ಸ್ವಾಗತಿಸಿ, ದಾಮೋದರ ಗೌಡ ವಂದಿಸಿದರು. ಭರತ್ ಡೆಂಬುಗ ಕಾರ್ಯಕ್ರಮ ನಿರೂಪಿಸಿದರು.

Related posts

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!