July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಕುಂಡದಬೆಟ್ಟು ಹಿಂದೂ ಸಂಗಮ ಆಯೋಜನಾ ಸಮಿತಿ ಪಡಂಗಡಿ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸ್ವಯಂ ಸೇವಕ ಮಲ್ಲಿನಾಥ ರವರು ಜ.12ರಂದು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಫೆ.1ರಂದು ಅಪರಾಹ್ನ ಗಂಟೆ 3.00 ಕ್ಕೆ ಹಿಂದೂ ಸಂಗಮ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಲಿದೆ. ಶೋಭಾಯಾತ್ರೆಯು ಗೋಳಿಯಂಗಡಿ ಎಸ್.ಡಿ.ಎಂ. ಐಟಿಐ ನಿಂದ ಮಂಜುಶ್ರೀ ಭಜನಾ ಮಂದಿರದವರೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ದ.ಕ.ಜಿಲ್ಲಾ ಪರವನ್ ಸಂಘ ಉಪಾಧ್ಯಕ್ಷ ಎಚ್. ಪದ್ಮ ಹಚ್ಚೇವುಪಲ್ಕೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ವೈ ಈಶ್ವರ ಭಟ್ , ಸೋಮನಾಥ ಕೆವೈ , ಶಿವಾನಂದ, ಸಂತೋಷ್ ಜೈನ್, ಪ್ರಕಾಶ ಪುರೋಹಿತ್, ಸಂತೋಷ್ ಜೈನ್ ಪಡಂಗಡಿ, ರತ್ನಾಕರ ಬರ್ಕರೆ, ಅನಿಲ್ ಹೆಗ್ಡೆ ಪಡಂಗಡಿ, ಮಂಡಲದ ಹಿಂದೂ ಸಂಘ ಸಮಿತಿ ಅಧ್ಯಕ್ಷ ಪ್ರಸನ್ನ ಹೆಬ್ಬಾರ್, ಆನಂದ ಎನ್, ರವಿ ಭಟ್, ರೋಹಿತ್ ಸಂಬಿಬೆಟ್ಟ, ದಿನಕರ ಕುಲಾಲ್, , ಶೀನ ಪೂಜಾರಿ, ಧರ್ಣಪ್ಪ , ಭರತ್ ರಾಜ್ ಆಮೈ, ನಿರಂಜನ ಪಾರೊಟ್ಟು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya
error: Content is protected !!