ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya
error: Content is protected !!