July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!