23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು.

ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ ಕ್ಷೇತ್ರ ಪಾರೆಂಕಿ ದೇವಾಲಯದ ಪ್ರಧಾನ ಅರ್ಚಕ ಟಿ ವಿ ಶ್ರೀಧರ ರಾವ್ ಇವರ ಪುರೋಹಿತದೊಂದಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ , ರಾತ್ರಿ ಗದ್ದಿಗೆ ಪೂಜೆ, ಮಹಾಪೂಜೆ , ದರ್ಶನ ಸೇವೆ, ದೈವ ದೇವರ ಭೇಟಿ, ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಾನ ಸಿರಿ ಕಲಾಕೇಂದ್ರ ಪುತ್ತೂರು ಇವರಿಂದ ಭಕ್ತಿ ಜಾನಪದ ಗೀತೆ ಸಂಗಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಶರರಾದ ಕೆ ಅರವಿಂದ ಪಡಿವಾಳ್, ಕೆ ರತ್ನರಾಜ ಪಡಿವಾಳ್ ಮೂಡಾಯೂರುಗುತ್ತು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಕೋಶಾಧಿಕಾರಿ ಡಾ. ಕೆ ಎಸ್ ಬಲ್ಲಾಳ್ , ಉಪಾಧ್ಯಕ್ಷರಾದ ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಗೌಡ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
✍️ವರದಿ ಹರ್ಷ ಬಳ್ಳಮಂಜ

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya
error: Content is protected !!