July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

ಬೆಳ್ತಂಗಡಿ: ಅಮೆರಿಕಾದ ಫ್ಲೋರಿಡಾದ ಯೋಗ ಯುನಿವರ್ಸಿಟಿಯಿಂದ ಉಪವಾಸ ಮತ್ತು ಆಧ್ಯಾತ್ಮಿಕ ಪ್ರಗತಿ ಎಂಬ ವಿಷಯದ ಮೇಲೆ ಮಹಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಪಡೆದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಡಾ.ಯೋಗಿಂದ್ರ ಭಟ್ ಇವರಿಗೆ ಬಾರ್ಯ ಶ್ರೀ ಮಹಾ ವಿಷ್ಣು ದೇವಸ್ಥಾನದ ವಠಾರದಲ್ಲಿ ಇಂಜಿನಿಯರ್ ಯಜ್ಞೇಶ್ ಪುತ್ತಿಲ ನೇತೃತ್ವದಲ್ಲಿ ಅಭಿನಂದನಾ ಸಮಾರಂಭವು ಜರಗಿತು.

ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆ ವಹಿಸಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಪುರುಷೋತ್ತಮ ಭಂಡಾರಿ ಮಂಗಳೂರು ಸುದೇಶ್ ರೈ ಮಂಗಳೂರು, ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ, ಸೂರ್ಯನಾರಾಯಣ ಕುದ್ದಣ್ಣಾಯ, ಸೇಸಪ್ಪ ಸಾಲಿಯನ್, ಕುಶಾಲಪ್ಪ ಗೌಡ, ವಿಠಲದಾಸ ಕಲ್ಲೂರಾಯ,ಸುಬ್ರಹ್ಮಣ್ಯ ಬಾರಿತ್ತಾಯ, ದಾಮೋದರ ನಾಯಕ್, ಮನೋಹರ ಶೆಟ್ಟಿ ಮತ್ತು ಯೋಗೇಂದ್ರ ಭಟ್ಟರ ಅಭಿಮಾನಿ ಬಳಗದವರು ಹಾಗೂ ಆಡಳಿತ ಸೇವಾ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು

ಆಮಂತ್ರಣ ಪತ್ರಿಕೆ ಬಿಡುಗಡೆ
ಈ ಸಂದರ್ಭದಲ್ಲಿ ಫೆಬ್ರವರಿ 6,7ರಂದು ಜರಗಲಿರುವ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಡಾ. ಯೋಗಿಂದ್ರ ಭಟ್ ಬಿಡುಗಡೆಗೊಳಿಸಿದರು.
ಕುಮಾರಿ ಪುಷ್ಪ ಪ್ರಸನ್ನ ಪ್ರಾರ್ಥಿಸಿದರು. ರಾಜೇಶ್ ರೈ ಹೆನ್ನಡ್ಕ ಸ್ವಾಗತಿಸಿ ಪ್ರವೀಣ್ ಎಂ ಬಾರ್ಯ ವಂದಿಸಿದರು. ದಿನೇಶ್ ಮತ್ತು ಸಂದೇಶ್ ಆಗ್ಫಲ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya
error: Content is protected !!